ಈಶ ನಿನ್ನ ಚರಣ ಭಜನೆ
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ
ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ||1||
ಶೋಧಿಸೆನ್ನ ಭವದ ಕಲುಷ ಬೋಧಿಸಯ್ಯ ಜ್ಞಾನವೆನಗೆಬಾಧಿಸುವಾ ಯಮನ ಬಾಧೆ ಬಿಡಿಸು ಮಾಧವ|| 2||
ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ ||3||
ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ ||4||
ಮೊದಲು ನಿನ್ನ ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ ||5||
ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ ||6||
ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ ||7||
ಮದನನಯ್ಯ ನಿನ್ನ ಮಹಿಮೆ ವದನದಲ್ಲಿ ಇರುವ ಹಾಗೆಹೃದಯದಲ್ಲಿ ಸದನ ಮಾಡು ಮುದದಿ ಶ್ರೀಧರ ||8||
ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ ||9||
ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ||10||
ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ ||11||
ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ||12||
ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ ||13||
ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ ||14||
ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ ||15||
ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ನಿನ್ನ ಚರಣದಲ್ಲಿ ಪುರುಷೋತ್ತಮ ||16||
ಸಾಧು ಸಂಗ ಕೊಟ್ಟು ನಿನ್ನ ಪಾದಭಜಕನೆನಿಸು ಎನ್ನಭೇದ ಮಾಡಿ ನೋಡದಿರೋ ಅಧೋಕ್ಷಜ ||17||
ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ ||18||
ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆ ಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ||19||
ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ ||20||
ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ ||21||
ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ||22||
ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ||23||
No comments:
Post a Comment